ವಯನಾಡ್ ಸಂತ್ರಸ್ತರಿಗೆ ದಿನಸಿ ಸಾಮಾಗ್ರಿಗಳು ಮತ್ತು ಅಗತ್ಯ ವಸ್ತುಗಳ ತಲುಪಿಸುವ ವಾಹನಕ್ಕೆ ಬಿಬಿಎಂಪಿ ಆಯುಕ್ತಾರಿಂದ ಚಾಲನೆ

Groceries and essential items to victims in Wayanad by BBMP employees association

ವಯನಾಡ್ ಸಂತ್ರಸ್ತರಿಗೆ ದಿನಸಿ ಸಾಮಾಗ್ರಿಗಳು ಮತ್ತು ಅಗತ್ಯ ವಸ್ತುಗಳ ತಲುಪಿಸುವ ವಾಹನಕ್ಕೆ ಬಿಬಿಎಂಪಿ ಆಯುಕ್ತಾರಿಂದ  ಚಾಲನೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಕೇರಳದ ವಯನಾಡ್‌ ನಲ್ಲಿ ಮಳೆ ಪ್ರವಾಹ, ಭೂಕುಸಿತದಿಂದ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ನೆರವು ಮತ್ತು ದಿನಸಿ ಸಾಮಾಗ್ರಿಗಳನ್ನು ತಲುಪಿಸುವ ವಾಹನಕ್ಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಸಹಕಾರ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಚಾಲನೆ ನೀಡಿದರು.
ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಮಾತನಾಡಿ ಜನರಿಗೆ ಸಮಸ್ಯೆ ಮತ್ತು ಸಂಕಷ್ಟಗಳು ಬಂದಾಗ ಬಿಬಿಎಂಪಿ ನೌಕರರ ಸಂಘವು ಸಹಾಯ, ಸಹಕಾರ ನೀಡುತ್ತಾ ಬಂದಿದೆ. ವಯನಾಡ್ ದುರಂತದಲ್ಲಿ ನಮ್ಮ ಬಿಬಿಎಂಪಿ ಸಂಘವು ಅಂದಾಜು 25ಲಕ್ಷ ರೂಪಾಯಿ ಮೌಲ್ಯದ ದಿನಸಿ ಸಾಮಾಗ್ರಿಗಳು ನೀಡುತ್ತಿದ್ದಾರೆ. ಬಿಬಿಎಂಪಿ ನೌಕರರ ಸಂಘವು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಬಳದಲ್ಲಿ ವಯನಾಡ್ ಸಂತ್ರಸ್ತರಿಗೆ ನೆರವಿನ ಸಹಾಯ ಹಸ್ತ ನೀಡಿದ್ದಾರೆ. ವಯನಾಡ್ ದುರಂತದಲ್ಲಿ ನೋವಿನ ಸಂಗತಿ, ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರದ ಅಧಿಕಾರಿಗಳ ಜೊತೆಯಲ್ಲಿ ಸಂಘ, ಸಂಸ್ಥೆಗಳು ಸಹಕಾರ ನೀಡುತ್ತಿದೆ ಎಂದು ಹೇಳಿದರು.
ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ ಕೇರಳ ವಯನಾಡ್ ನಲ್ಲಿ ಮಳೆ ಪ್ರವಾಹ ದುರಂತದಲ್ಲಿ ಜನರು ಸಂಕಷ್ಟದಲ್ಲಿ ಇದ್ದಾರೆ .ಸರ್ಕಾರ ಜೊತೆಯಲ್ಲಿ ಸಂಘ, ಸಂಸ್ಥೆಗಳು ಸಾರ್ವಜನಿಕರು ಸಹಕಾರ ನೀಡಿದಾಗ ಬಂದ ಸಂಕಷ್ಟಗಳಿಗೆ ಸುಲಭ ಪರಿಹಾರವಾಗುತ್ತದೆ. ನಮ್ಮ ಸಂಘಟನೆ ಈ ಹಿಂದೆ ಉತ್ತರ ಕರ್ನಾಟಕ ಮತ್ತು ಕೊಡಗು ಮಳೆ ಪ್ರವಾಹದಿಂದ ಸಂಕಷ್ಟ ಸಮಯದಲ್ಲಿ ದಿನಸಿ ಸಾಮಾಗ್ರಿಗಳನ್ನು ತೆಗೆದುಕೊಂಡು ಜನರಿಗೆ ನೀಡಲಾಯಿತು. ಧರ್ಮಸ್ಥಳದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಗ 1ಲಕ್ಷ ಲೀಟರ್ ಕುಡಿಯುವ ನೀರನ್ನು ನೀಡಲಾಯಿತು.
ವಯನಾಡ್ ಸಂತ್ರಸ್ತರಿಗೆ ಹತ್ತು ಟನ್ ಆಹಾರ ಪದಾರ್ಥಗಳು ಮತ್ತು ದಿನ ನಿತ್ಯ ಬಳಕೆಯ ವಸ್ತುಗಳಾದ(ಹಾಸಿಗೆ, ದಿಂಬು, ಬೆಡ್ ಶಿಟ್,ಸ್ವಟರ್, ಜರ್ಕಿನ್, ಪಾದರಕ್ಷೆಗಳು,ಸೀರೆ, ಕಂಬಳಿ,ಮಹಿಳೆಯರ ನೈಟ್ ಡ್ರೆಸ್ ಮತ್ತು ಪಂಚೆ,ಟವಲ್, ಲುಂಗಿ, ಟೀ ಶರ್ಟ್) ನೀಡಲಾಗುತ್ತಿದೆ ಎಂದು ಹೇಳಿದರು.
ಕ್ಷೇಮಾಭಿವೃದ್ದಿ ಸಂಘದ ಮತ್ತು ಸಹಕಾರ ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ.ಬಾಬಣ್ಣ, ಕೆ.ಜಿ.ರವಿ, ಡಾ.ಶೋಭಾ, ಹೆಚ್.ಕೆ.ಹರೀಶ್, ಸೋಮಶೇಖ‌ರ್, ಆ‌ರ್.ರೇಣುಕಾಂಬ, ಕೆ.ಮಂಜೇಗೌಡ, ಶ್ರೀಧರ್ ಎನ್, ಸಂತೋಷ್ ಕುಮಾ‌ರ್, ಎನ್‌.ಮಂಜುನಾಥ್, ಕೆ.ನರಸಿಂಹ, ಕೆ.ಸಂತೋಷ್ ಕುಮಾರ್ ನಾಯ್ಕ, ಸಿ.ಎಂ.ಮುನಿರಾಜು, ಮಹೇಶ್ ಎಂ, ಮಂಜುನಾಥ್‌ ಎಲ್.ಆರ್, ಹರೀಶ್ ಕುಮಾ‌ರ್ ಎನ್, ವಿನಯಕುಮಾರ್, ರಾಜಶೇಖ‌ರ್, ಮಂಜುನಾಥ್, ವಾಣಿ ಅ‌ರ್.ಪಿ.ರವರು ಉಪಸ್ಥಿತರಿದ್ದರು.