ಕಾಂಗ್ರೆಸ್ ಎಂದರೆ ಅದು ಅಧಿಕಾರದಿಂದ ಅಧಿಕಾರಕ್ಕೋಸ್ಕರ ಇರುವ ಪಕ್ಷ ಸದಸ್ಯತ್ವ ನೋಂದಣಿಯಲ್ಲಿ ದಾಖಲೆ: ವಿಜಯೇಂದ್ರ ವಿಶ್ವಾಸ

ಕಾಂಗ್ರೆಸ್ ಎಂದರೆ ಅದು ಅಧಿಕಾರದಿಂದ ಅಧಿಕಾರಕ್ಕೋಸ್ಕರ ಇರುವ ಪಕ್ಷ ಸದಸ್ಯತ್ವ ನೋಂದಣಿಯಲ್ಲಿ ದಾಖಲೆ: ವಿಜಯೇಂದ್ರ ವಿಶ್ವಾಸ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸದಸ್ಯತ್ವ ಪಡೆದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 2047ನೇ ಇಸವಿಗೆ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಮಾನ್ಯ ಪ್ರಧಾನಿ ನರೇಂದ್ರ ಮೋದಿಜೀ ಅವರದು. ಮೋದಿಜೀ ಅವರಿಗೆ ಇನ್ನೂ ಹೆಚ್ಚು ಬಲ ಕೊಡುವ ಕೆಲಸ ನಡೆಸಬೇಕಿದೆ ಎಂದು ತಿಳಿಸಿದರು. ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‍ಗಳಲ್ಲಿ ಕಾರ್ಯಕರ್ತರನ್ನು ಜೋಡಿಸಲಾಗಿದೆ ಎಂದರು.

ಕಾಂಗ್ರೆಸ್ ಎಂದರೆ ಅದು ಅಧಿಕಾರದಿಂದ ಅಧಿಕಾರಕ್ಕೋಸ್ಕರ ಇರುವ ಪಕ್ಷ. ಅಧಿಕಾರ ಇಲ್ಲವೆಂದರೆ ಕಾಂಗ್ರೆಸ್ ಪಕ್ಷದವರು ನೀರಿನಿಂದ ಹೊರಗೆ ಬಿದ್ದ ಮೀನಿನ ಪರಿಸ್ಥಿತಿ ಹೊಂದಿರುತ್ತಾರೆ ಎಂದು ಟೀಕಿಸಿದರು. ಅಧಿಕಾರ ಇಲ್ಲದೆ ಬದುಕಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವೇ ಇಲ್ಲ ಎಂದು ನುಡಿದರು.

ಮತ್ತೊಂದು ಕಡೆ ಬಿಜೆಪಿ ಸೇವೆಯೇ ಸಂಘಟನೆ ಎಂಬ ಶ್ರೇಷ್ಠ ಭಾವನೆಯಿಂದ ದೇಶ ಮೊದಲು, ನಂತರ ಪಕ್ಷ ಎಂಬ ಉತ್ತಮ ಸಿದ್ಧಾಂತ ಹೊಂದಿದೆ. ಕೋವಿಡ್ ದಿನಗಳಲ್ಲಿ ದೇಶದ ಇತರ ರಾಜಕೀಯ ಪಕ್ಷದವರು ಮನೆಯಲ್ಲಿ ಕೂತಿದ್ದರು. ಆದರೆ, ನಮ್ಮ ಪಕ್ಷವು ದೇಶದ ಲಕ್ಷಾಂತರ ಜನರ ಸಂಕಷ್ಟಕ್ಕೆ ಸ್ಪಂದಿಸಿತ್ತು ಎಂದು ವಿವರಿಸಿದರು. ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ಸೇರಿ, ಮುಖಂಡರು, ಕಾರ್ಯಕರ್ತರು ಆಹಾರದ ಕಿಟ್ ನೀಡುವುದು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಉಚಿತ ಔಷಧಿ, ಮಾತ್ರೆ ಕೊಡುವ ಕೆಲಸ ಮಾಡಿದ್ದರು ಎಂದು ನೆನಪಿಸಿದರು.

ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. ಈ ಬಾರಿ ಇನ್ನೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗುವುದು. ಎಲ್ಲ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಹೇಳಿದರು. ಮುಂದಿನ 40-45 ದಿನಗಳ ಕಾಲ ಎರಡು ಹಂತಗಳ ಅಭಿಯಾನದಲ್ಲಿ ಭಾಗವಹಿಸೋಣ ಎಂದು ತಿಳಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನ ಪರ್ವದ ಉದ್ಘಾಟನೆ ಇವತ್ತು ನಡೆದಿದೆ. ಇದು ಹಬ್ಬದ ವಾತಾವರಣ. ಗಣೇಶ ಹಬ್ಬದ ಹತ್ತಿರದಲ್ಲಿ ನಾವಿದ್ದು, ರಾಜ್ಯದ ಜನತೆಗೆ ಗೌರಿಗಣೇಶ ಹಬ್ಬದ ಶುಭಾಶಯಗಳು ಎಂದು ತಿಳಿಸಿದರು. ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಮೊನ್ನೆ ಈ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಅರ್ಥಪೂರ್ಣ ಅಭಿಯಾನ ನಡೆಸಬೇಕೆಂದು ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ ಅವರ ಅಪೇಕ್ಷೆ ಇದೆ. ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲ. ಬಿಜೆಪಿ ಸರ್ವಸ್ಪರ್ಶಿ- ಸರ್ವವ್ಯಾಪಿ ಎಂದು ತಿಳಿಸಿದರು.